logo

ಮನೆ ಮನೆ ಸಂಪರ್ಕ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಮನೆ ಮನೆ ಸಂಪರ್ಕ ಅಭಿಯಾನದ ಅಂಗವಾಗಿ ಇಂದು ಮೈಸೂರಿನ ಖ್ಯಾತ ವೈದ್ಯರಾದ ಡಾಕ್ಟರ್ ಲಕ್ಷ್ಮೀ ನಾರಾಯಣ್ ಪ್ರಸಾದ್ ರವರನ್ನು ಭೇಟಿ ಮಾಡಿ ಕಳೆದ ಹತ್ತು ವರ್ಷಗಳಲ್ಲಿ ಸನ್ಮಾನ್ಯ ನರೇಂದ್ರ ಮೋದಿಯವರು ಕೈಗೊಂಡಿರುವ ಅಭಿವೃದ್ಧಿಯನ್ನು ಬೆಂಬಲಿಸುವಂತೆ ಹಾಗೂ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತಯಾಚಿಸಲಾಯಿತು.

ಈ ಸಂದರ್ಭದಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಶ್ರೀ ಶ್ರೀವತ್ಸ ರವರು, ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರವರು, ಒಬಿಸಿ ಮೋರ್ಚ ರಾಜ್ಯಾಧ್ಯಕ್ಷರಾದ ಶ್ರೀ ರಘು ಕೌಟಿಲ್ಯ ರವರು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.
#LokSabhaElections2024

5
667 views