logo

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ದ ಬಿಜೆಪಿ ಪ್ರತಿಭಟನೆ.

SC/ST ಸಮುದಾಯದ ಹಣ ದುರುಪಯೋಗ, ಮುಡಾ ಹಗರಣ, ಕಾಂಗ್ರೆಸ್ ಬ್ರಹ್ಮಾಂಡ ಭ್ರಷ್ಟಾಚಾರ ಹಾಗೂ ಅಭಿವೃದ್ಧಿ ಶೂನ್ಯ ಆಡಳಿತ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಬಿಜೆಪಿಯು ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಾಲು ಸಾಲು ಹಗರಣಗಳ ಮೂಲಕ ರಾಜ್ಯದ ಜನಸಾಮಾನ್ಯರ, ಪರಿಶಿಷ್ಟ ಪಂಗಡಗಳ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳ ಹಣವನ್ನು ಲೂಟಿ ಮಾಡುತ್ತಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಹಸ್ರಾರು ಸಂಖ್ಯೆಯಲ್ಲಿ ವಿಧಾನಸೌಧ ಮುತ್ತಿಗೆ ಯತ್ನಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @DVSadanandGowda, ಸಂಸದರು ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ @GovindKarjol, ಬಿಜೆಪಿ ಪಕ್ಷದ
ಅಧ್ಯಕ್ಷರಾದ ವಿಜಯೇಂದ್ರ ಹಾಗು ಪಕ್ಷದ ಪದಾಧಿಕಾರಿಗಳು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

0
5391 views