logo

ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಬಡವರಿಗೆ ಸಹಾಯಕಾರಿ ಮಂಜುನಾಥ ಉಪ್ಪಾರ

ರೋಟರಿ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

ಬ್ಯಾಡಗಿ ಕದರಮಂಡಲಗಿ ರಸ್ತೆಯಲ್ಲಿರುವ ಸಮಗ್ರ ಸಮಾಜ ಕಾರ್ಯ ನಿರ್ವಹಣಾ ಕೇಂದ್ರ ಸ್ನೇಹಸದನದಲ್ಲಿ ರೋಟರಿ ಕ್ಲಬ್ ಬ್ಯಾಡಗಿ, ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಮತ್ತು ಜಿಲ್ಲಾ ಅಂದತ್ವ ನಿವಾರಣ ಕಾರ್ಯಕ್ರಮದ ಅಡಿಯಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು.
ರೋಟರಿ ಕ್ಲಬ್ ಅಸಿಸ್ಟೆಂಟ್ ಗವರ್ನರ್ ಮಂಜುನಾಥ ಉಪ್ಪಾರ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಕಳೆದ ಹಲವು ವರ್ಷಗಳಿಂದ ನಾವು ಶಂಕರ ಕಣ್ಣಿನ ಆಸ್ಪತ್ರೆಯವರ ಸಹಾಯ ಸಹಕಾರದಿಂದ ಬ್ಯಾಡಗಿ ತಾಲೂಕಿನಲ್ಲಿ ರೋಟರಿ ಕ್ಲಬ್ ಬ್ಯಾಡಗಿಯ ಸಹಯೋಗದಲ್ಲಿ ಶಿಬಿರ ನಡೆಸುತ್ತಾ ಬಂದಿದ್ದು ಸಹಸ್ರಾರು ಬಡ ಸಾರ್ವಜನಿಕರು ಮತ್ತು ಹಿರಿಯ ನಾಗರಿಕರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ ಇನ್ನೂ ಮುಂದಿನ ದಿನಗಳಲ್ಲಿ ಕಣ್ಣಿನ ತೊಂದರೆ ಇರುವ ಎಲ್ಲ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಲಿ ಎಂದರು. ಇಂದಿನ ಶಿಬಿರದಲ್ಲಿ ಒಟ್ಟು 51 ಸಾರ್ವಜನಿಕರು ತಪಾಸಣೆ ಮಾಡಿಸಿಕೊಂಡರು, ಜೊತೆಗೆ 30 ಶಿಬಿರಾರ್ಥಿಗಳನ್ನು ಶಸ್ತ್ರ ಚಿಕಿತ್ಸೆಗೆ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ಕಳಿಸಿಕೊಡಲಾಯಿತು ಎಂದು ಅಸಿಸ್ಟೆಂಟ್ ಗವರ್ನರ್ ಮಂಜುನಾಥ ಉಪ್ಪಾರ ಅವರು ಮಾಹಿತಿ ನೀಡಿದರು.
ಸ್ನೇಹ ಸದನದ ನಿರ್ದೇಶಕಿ ಸಿಸ್ಟರ್ ರೂಪ ಅಸಿಸ್ಟೆಂಟ್ ಗವರ್ನರ್ ಮಂಜುನಾಥ ಉಪ್ಪಾರ ಅವರು ಪ್ರತಿ ತಿಂಗಳು ಶಿಬಿರ ನಡೆಸಲು ಶಿಬಿರದ ಪ್ರಚಾರ ಹಾಗು ಆಸ್ಪತ್ರೆ ಸಿಬ್ಬಂದಿಗಳಿಗೆ ಊಟ ಉಪಚಾರ ಸಲುವಾಗಿ ವೆಚ್ಚ ಭರಿಸಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಇಂತಹ ಹಲವು ಶಿಬಿರ ಆಯೋಜಿಸಲು ಸಹ ಕಾರಣಿಕರ್ತರಾಗಿದ್ದು ಇದರಿಂದ ತಾಲ್ಲೂಕಿನ ಸಹಸ್ರಾರು ಸಾರ್ವಜನಿಕರಿಗೆ ಸಹಾಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ನೇಹ ಸದನದ ನಿರ್ದೇಶಕಿ ಸಿಸ್ಟರ್ ರೂಪ, ರೋಟರಿ ಸಂಸ್ಥೆಯ ಅಧ್ಯಕ್ಷ ಸಿದ್ಧಲಿಂಗಯ್ಯ ಬೂದಿಹಾಳಮಠ, ಅಸಿಸ್ಟೆಂಟ್ ಗವರ್ನರ್ ಮಂಜುನಾಥ ಉಪ್ಪಾರ, ಮತ್ತು ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯರು ಡಾ.ರಂಗೋಲಿ, ವೈಷ್ಣವಿ ಹಾಗೂ ಸಿಬ್ಬಂದಿ ವರ್ಗದವರು, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಕುಮಾರಿ ಸುರೇಖಾ, ಸ್ನೇಹ ಸದನದ ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಉಪಸ್ಥಿತರಿದ್ದರು

6
2861 views