ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಸಕಲೇಶಪುರ: ಭಾರತೀಯ ಜನತಾ ಪಾರ್ಟಿ ಸಕಲೇಶಪುರ ಮಂಡಲ ವತಿಯಿಂದ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ, ಎಸ್ಸಿ ಮತ್ತು ಎಸ್ಟಿ ಅನುದಾನದ ದುರ್ಬಳಕೆ , ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಖಂಡಿಸಿ, 18 ಬಿಜೆಪಿ ಶಾಸಕರ 6 ತಿಂಗಳ ಅಮಾನತು ವಿರೋಧಿಸಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸಿಮೆಂಟ್ ಮಂಜು ಅವರ ನೇತೃತ್ವದಲ್ಲಿ ಪಟ್ಟಣದ ಹಳೆ ಬಸ್ ನಿಲ್ದಾಣದಿಂದ ಎ.ಸಿ ಕಚೇರಿಯವರೆಗೂ ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಬಿಜೆಪಿ ಸಕಲೇಶಪುರ ಮಂಡಲದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.