logo

ಬೀದಿ ನಾಯಿಗಳ ದಾಳಿಗೆ 6 ವರ್ಷದ ಮಗು ಬಲಿ – ಚಿಕಿತ್ಸೆ ಫಲಕಾರಿಯಾಗದೆ ದುರ್ಮರಣ, ಆಡಳಿತ ವಿರುದ್ಧ ಸಾರ್ವಜನಿಕರ ಆಕ್ರೋಶ

ತಿಪಟೂರು ತಾಲ್ಲೂಕಿನ ಅಯ್ಯನಬಾವಿ ಬೋವಿ ಕಾಲೋನಿಯಲ್ಲಿ 6 ವರ್ಷದ ನವ್ಯ ಎಂಬ ಅಮಾಯಕ ಬಾಲಕಿ ಬೀದಿನಾಯಿಗಳ ದಾಳಿಗೆ ಬಲಿಯಾದ ಹೃದಯವಿದ್ರಾವಕ ಘಟನೆ ನಡೆದಿದೆ.

ಬೀದಿಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ದಾಳಿ ನಡೆಸಿದ ನಾಯಿಗಳ ಹಿಂಡು ತಲೆ, ಹೊಟ್ಟೆ ಸೇರಿದಂತೆ ಹಲವು ಅಂಗಾಂಗಗಳನ್ನು ತಿಂದ ದಾರುಣ ದೃಶ್ಯ ಕಂಡು ಸಾರ್ವಜನಿಕರು ಬೆಚ್ಚಿಬಿದ್ದು ತಕ್ಷಣ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ದಾರುಣ ಅಂತ್ಯ ಕಂಡಿದೆ.

ತಾಲ್ಲೂಕಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿರುವುದರಿಂದ ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. "ಮಗು ಪ್ರಾಣ ಕಳೆದುಕೊಂಡಿದ್ದು ಆಡಳಿತದ ನಿರ್ಲಕ್ಷ್ಯವೇ ಕಾರಣ" ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದು, ತುರ್ತಾಗಿ ಆಡಳಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಸರ್ಕಾರದಿಂದ ಆರ್ಥಿಕ ನೆರವಿನೊಂದಿಗೆ ತುರ್ತು ಕ್ರಮಗಳ ಅಗತ್ಯವಿದೆ ಎಂಬುದು ಸಾರ್ವಜನಿಕರ ಆಗ್ರಹ

5
143 views