logo

ಶಿರಾ: ಅದ್ದೂರಿಯಾಗಿ ಭಗೀರಥ ಜಯಂತಿ ನಡೆಸಲು ಉಪ್ಪಾರ ಸಮುದಾಯದ ಮುಖಂಡರಿಂದ ಪೂರ್ವಭಾವಿ ಸಭೆ

ಶಿರಾ: ತಾಲೂಕಿನ ಶಿರಾ ನಗರದಲ್ಲಿ ಭಗೀರಥ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಉಪ್ಪಾರ ಸಮುದಾಯದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಜೂನ್ 8, 2025 ರಂದು ನಡೆಯಲಿರುವ ಕಾರ್ಯಕ್ರಮದ ಕುರಿತು ಶಿರಾ ಪ್ರವಾಸಿ ಮಂದಿರದಲ್ಲಿ ಸಭೆ ಆಹ್ವಾನಿಸಲಾಗಿತ್ತು.

ಈ ಸಭೆಯಲ್ಲಿ ಶಿರಾ ನಗರಸಭೆಯ ಆಯುಕ್ತ ಶ್ರೀ ರುದ್ರೇಶ್, ಉಪ್ಪಾರ ಸಂಘದ ಅಧ್ಯಕ್ಷ ಶ್ರೀ ಪಾಂಡುರಂಗಪ್ಪ, ಉಪಾಧ್ಯಕ್ಷ ರಾಮಚಂದ್ರಪ್ಪ, ತಾ.ಪಂ. ನರೇಗಾ ಶಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಕನಕಪ್ಪ ಹಾಗೂ ಸಂಘದ ನಿರ್ದೇಶಕರು, ಹೋಬಳಿ ಮಟ್ಟದ ಸಮಾಜದ ಪ್ರಮುಖರು ಭಾಗವಹಿಸಿದ್ದರು.

ಸಭೆಯಲ್ಲಿ ಭಗೀರಥ ಜಯಂತಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಿತು. ವಿಶೇಷವಾಗಿ, 2025ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ 80%ಕ್ಕಿಂತ ಮೇಲ್ಪಟ್ಟ ಅಂಕಗಳನ್ನು ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಲಾಗಿದೆ.

ಇದಕ್ಕಾಗಿ ಪುರಸ್ಕೃತ ವಿದ್ಯಾರ್ಥಿಗಳ ಹೆಸರು, ಈ ಸಾಲಿನ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ನಕಲುಗಳನ್ನು ಸಂಘದ ಸದಸ್ಯರಿಗೆ ನೀಡಬೇಕೆಂದು ವಿನಂತಿಸಲಾಗಿದೆ. ವಿವರಗಳನ್ನು ಮೇ 30ರೊಳಗೆ ಸಲ್ಲಿಸುವಂತೆ ಮನವಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಯನ್ನು ಸಂಪರ್ಕಿಸಬಹುದು: 94483 74250

40
3297 views