logo

ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಭಾರ ಅಧ್ಯಕ್ಷರಾಗಿ ಹನುಮಂತರಾಯಪ್ಪ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಭಾರ ಅಧ್ಯಕ್ಷರಾಗಿ ಹನುಮಂತರಾಯಪ್ಪ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ನಡೆದ ಅಭಿನಂದನ ಸಮಾರಂಭ ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾಧ್ಯಕ್ಷ ಪಿ.ಗಂಗಾದರಪ್ಪ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ತೆರವಾಗಿರುವ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹನುಮಂತರಾಯಪ್ಪ ಅವರನ್ನು ರಾಜ್ಯಾಧ್ಯಕ್ಷ ಷಡಾಕ್ಷರಿ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷ ಸ್ಥಾನದ ನೇಮಕಾತಿ ಆದೇಶ ಪತ್ರವನ್ನು ನೀಡಿ ಅಭಿನಂದಿಸಲಾಯಿತು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು ನೂತನ ಜಿಲ್ಲಾಧ್ಯಕ್ಷ ಹನುಮಂತರಾಯಪ್ಪ ಅವರನ್ನು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಹೂವಿನ ಹಾರ ಹಾಕುವುದರ ಮೂಲಕ ಅಭಿನಂದಿಸಿ ಸನ್ಮಾನಿಸಲಾಯಿತು.

55
3329 views