logo

ಶ್ರೀಲಂಕಾದ ಕೊಲಂಬದಲ್ಲಿ ನಡೆದ 3ನೇ ಮುಕ್ತ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್, ಕರಾಟೆ ಸ್ಪರ್ಧೆಯಲ್ಲಿ ಎಸ್‌ಎಲ್‌ಎಸ್ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಪದಕ.

ದೇವನಹಳ್ಳಿ: ಇತ್ತೀಚೆಗೆ ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಮೂರನೇ ಮುಕ್ತ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಎಸ್.ಎಲ್.ಎಸ್. ಶಾಲೆಯ ವಿದ್ಯಾರ್ಥಿಗಳಿಬ್ಬರು ಬೆಳ್ಳಿ ಪದಕ ಪಡೆದ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ವತಿಯಿಂದ ಅಭಿನಂದನ ಕಾರ್ಯಕ್ರಮ ನಡೆಯಿತು.

ದೇವನಹಳ್ಳಿ ಪಟ್ಟಣದ ಕುರುಬರ ಕುಂಟೆ ರಸ್ತೆಯಲ್ಲಿರುವ ಎಸ್ ಎಲ್ ಎಸ್ ಆಂಗ್ಲ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಲಾ ಸಂಸ್ಥಾಪಕ ಕಾರ್ಯದರ್ಶಿ ಡಾ.ಡಿ.ಎಸ್. ಧನಂಜಯ್ ಮಾತನಾಡಿ, ಶ್ರೀಲಂಕಾದಲ್ಲಿ ನಡೆದ ಮೂರನೇ ಮುಕಾಂತರ ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿ ಕಟಾ ಸ್ಪರ್ಧೆಯಲ್ಲಿ ಚಿನ್ನದ ಪದಕ, ಹೋರಾಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದ ಇಬ್ಬರು ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುತ್ತಿದೆ. ಇವರ ಈ ಸಾಧನೆ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕರಾಟೆ ಚಂಗಪ್ಪ, ಶಾಲಾ ಸಹ ಶಿಕ್ಷಕ ನಿಜಲಿಂಗಪ್ಪ, ಮಂಜುನಾಥ್, ಶಿಕ್ಷಕ ವರ್ಗ ಮತ್ತು ವಿದ್ಯಾರ್ಥಿಗಳು ಇದ್ದರು.

19
2265 views