logo

ತಾಳಿಕೋಟೆಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮಳ ಭಾವಚಿತ್ರದ ಭವ್ಯ ಮೆರವಣಿಗೆ : ಸಾನಿಧ್ಯ ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಕೂಡಲಸಂಗಮ


ತಾಳಿಕೋಟಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರದ ಭವ್ಯ ಮೆರವಣಿಗೆ; ಪುತ್ಥಳಿ ಸ್ಥಾಪನೆಯ ದ್ವಿತೀಯ ವಾರ್ಷಿಕೋತ್ಸವದ ಸಂಭ್ರಮ
: ಪಟ್ಟಣದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮಳ ಪುತ್ಥಳಿ ಸ್ಥಾಪನೆಯ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ, ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ನಿರ್ಮಾಣ ಸಮಿತಿಯು ಶುಕ್ರವಾರ ಆಯೋಜಿಸಿದ್ದ ಚೆನ್ನಮ್ಮಾಜಿಯ ಭಾವಚಿತ್ರದ ಭವ್ಯ ಮೆರವಣಿಗೆ ಹಾಗೂ ಧರ್ಮ ಸಭೆಯು ವಿಜೃಂಭಣೆಯಿಂದ ಜರುಗಿತು.
ಪಟ್ಟಣದ ಚೆನ್ನಮ್ಮ ವೃತ್ತದಲ್ಲಿರುವ ಚೆನ್ನಮ್ಮಾಜಿಯ ಪುತ್ಥಳಿಗೆ ವಿಶೇಷ ಪೂಜೆ ಸಲ್ಲಿಸಿ, ಹೂಮಾಲೆ ಅರ್ಪಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ನಾವದಗಿ ಬೃಹನ್ಮಠದ ಷಟಸ್ಥಲ , ಬ್ರಹ್ಮ. ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರು ಮೆರವಣಿಗೆಗೆ ಚಾಲನೆ ನೀಡಿದರು.
ಕಿತ್ತೂರು ಚೆನ್ನಮ್ಮ ವೃತ್ತದಿಂದ ಸಕಲ ವಾದ್ಯಮೇಳ ಹಾಗೂ ಜಯಘೋಷಗಳೊಂದಿಗೆ ಆರಂಭವಾದ ಮೆರವಣಿಗೆಯು, ಶ್ರೀ ಬಸವೇಶ್ವರ ವೃತ್ತ, ಮಹಾರಾಣಾ ಪ್ರತಾಪ್ ಸಿಂಹ ವೃತ್ತ, ಶಿವಾಜಿ ವೃತ್ತ, ಕತ್ರಿ ಬಜಾರ್ ಮಾರ್ಗವಾಗಿ ರಾಜವಾಡೆಯನ್ನು ತಲುಪಿತು.
ಧರ್ಮ ಸಭೆ ಹಾಗೂ ಆಶೀರ್ವಚನ:
ನಂತರ ರಾಜವಾಡೆಯಲ್ಲಿ ಧರ್ಮ ಸಭೆ ಜರುಗಿತು. ಸಭೆಯ ದಿವ್ಯ ಸಾನಿಧ್ಯ ವಹಿಸಿದ್ದ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳು ತಮ್ಮ ಆಶೀರ್ವಚನದಲ್ಲಿ, "ಕಿತ್ತೂರು ರಾಣಿ ಚೆನ್ನಮ್ಮಳ ಶೌರ್ಯ, ಪರಾಕ್ರಮ ಮತ್ತು ಸ್ವಾಭಿಮಾನ ನಮಗೆಲ್ಲರಿಗೂ ಆದರ್ಶಪ್ರಾಯವಾಗಿದೆ," ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ನೀಲಮ್ಮ ಪಾಟೀಲ ವಹಿಸಿದ್ದರು. ಪರಮಪೂಜ್ಯ ರಾಜೇಂದ್ರ ಒಡೆಯರ್ ಶಿವಾಚಾರ್ಯರು, ಜ್ಯೋತಿಷ್ಯ ರತ್ನ ರಾಮಲಿಂಗಯ್ಯ ಮಹಾಸ್ವಾಮಿಗಳು ಹಾಗೂ ಹಿಕ್ಕನಗುತ್ತಿ ಲಿಂಗಾಯತ ಮಹಾಮಠದ ಪೂಜ್ಯ ಪ್ರಭುಲಿಂಗ ಶರಣರು ಸಾನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಪ್ರವಚನಕಾರ ಪ್ರಭುಲಿಂಗ ಶರಣರು, ಮಂಜುಳಾ ತಾಯಿ ಬಳಗಾನೂರ, ಮೆಹಬೂಬ ಮುತ್ಯಾ, ಪುರಸಭೆ ಅಧ್ಯಕ್ಷೆ ಜುಬೇದಾಬೇಗಂ ಜಮಾದಾರ, ಉಪಾಧ್ಯಕ್ಷೆ ಗೌರಮ್ಮ ಕುಂಬಾರ, ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪಲ್ಲವಿ ನಾಡಗೌಡ, ಶ್ರೀಮತಿ ಕಾವೇರಿ ಅರ್ಜುನ್, ಸೋಮಶೇಖರ ಮಾಳನೂರ, ಶರಣಬಸಪ್ಪ ಗಂಗಶಟ್ಟಿ ಉಪಸ್ಥಿತರಿದ್ದರು.
ಪುತ್ಥಳಿ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ಚಂದ್ರಶೇಖರ ಪಾಟೀಲ, ಅಧ್ಯಕ್ಷೆ ನೀಲಮ್ಮ ಎಸ್. ಪಾಟೀಲ, ಉಪಾಧ್ಯಕ್ಷ ಕಲ್ಲಪ್ಪ ಪಾಟೀಲ, ಪ್ರಧಾನ ಕಾರ್ಯದರ್ಶಿ ಎಂ.ಬಿ. ಕೋಟಿ, ಕಾರ್ಯದರ್ಶಿ ಬಿ.ಕೆ. ಪಾಟೀಲ, ವಿಶ್ವನಾಥ, ಶ್ರೀಮತಿ ಅಂಬಿಕಾ ಪಾಟೀಲ, ಅಶ್ವಿನಿ ಪಾಟೀಲ, ದೀಪಿಕಾ ಪಾಟೀಲ ಸೇರಿದಂತೆ ಸಮಾಜದ ಗಣ್ಯರು, ಹಿರಿಯರು ಹಾಗೂ ಅಪಾರ ಸಂಖ್ಯೆಯಲ್ಲಿ ಮಹಿಳೆಯರು.
SCN TV NEWS. TALIKOTI

9
1422 views