logo

ಪತ್ರಕರ್ತರಿಗೆ ಬೆದರಿಕೆ ಹಾಕಿದರೆ 50 ಸಾವಿರ ದಂಡ 3 ವರ್ಷ ಜೈಲು - ಪ್ರಧಾನಿ ಮೋದಿ Jun 21, 2025 |

ನವದೆಹಲಿ: ಭಾರತದಲ್ಲಿ ಪತ್ರಿಕೋದ್ಯಮವು ಗಂಭೀರ ಬಿಕ್ಕಟ್ಟಿನ ಹಂತವನ್ನು ಎದುರಿಸುತ್ತಿದೆ. ಸತ್ಯದ ಧ್ವನಿ ಎತ್ತುವ ಪತ್ರಕರ್ತರ ಮೇಲಿನ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೇಶದಲ್ಲಿ ಪತ್ರಕರ್ತರ ಸುರಕ್ಷತೆ ವಿಷಯದಲ್ಲಿ ಭಾರತ ಅತ್ಯಂತ ಅಪಾಯಕಾರಿ ರಾಷ್ಟ್ರಗಳ ಸ್ಥಾನದಲ್ಲಿದೆ. ವರದಿ ಮಾಡುವಾಗ ಪತ್ರಕರ್ತರು ಪ್ರಾಣ ಕಳೆದುಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ.

ಹೀಗಿರುವಾಗ ಪತ್ರಕರ್ತರಿಗೆ ಬೆದರಿಕೆಹಾಕುವವರ ವಿರುದ್ಧ ಸರ್ಕಾರ ಈಗ ಕಠಿಣ ನಿಲುವು ತೆಗೆದುಕೊಂಡಿದೆ.

ಅಲಹಾಬಾದ್‌ ಹೈಕೋರ್ಟ್‌ನ ಸೂಕ್ತ ಸೂಚನೆಯ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. "ಪತ್ರಕರ್ತರಿಗೆ ಬೆದರಿಕೆ ಹಾಕುವ ಅಥವಾ ಅಸಭ್ಯವಾಗಿ ವರ್ತಿಸುವವರ ವಿರುದ್ಧ ₹50,000 ದಂಡ ಮತ್ತು 3 ವರ್ಷವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು,” ಎಂದು ಎಚ್ಚರಿಕೆ ನೀಡಿದ್ದಾರೆ.

ಸಿಎಂ ಯೋಗಿಯವರ ಪ್ರಕಾರ, ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗುವುದಿಲ್ಲ. ಇನ್ನು ಮುಂದೆ ಪತ್ರಕರ್ತರೊಂದಿಗೆ ಗೌರವಯುತವಾಗಿ ವರ್ತಿಸಲೇಬೇಕು. ಪತ್ರಕರ್ತರಿಗೆ ಬೆದರಿಕೆ ಹಾಕಿದರೆ 24 ಗಂಟೆಯೊಳಗೆ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ಮೋದಿ ಕೂಡ, "ಪತ್ರಕರ್ತರಿಗೆ ಗೌರವ ನೀಡುವ ಪರಂಪರೆಯನ್ನು ನಾವು ಉಳಿಸಬೇಕು. ತಾತ್ಕಾಲಿಕ ತೊಂದರೆಗಳು ಕಾನೂನು ಮಟ್ಟದಲ್ಲಿ ಬೃಹತ್ ಸಮಸ್ಯೆಗಳನ್ನು ತಂದೊಡ್ಡಬಹುದು"ಬೃಹತ್ ಸಮಸ್ಯೆಗಳನ್ನು ತಂದೊಡ್ಡಬಹುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಮಾಧ್ಯಮದವರ ಮೇಲೆ ನಡೆದ ಹಲ್ಲೆ ಪ್ರಕರಣಗಳು ದೇಶಾದ್ಯಂತ ಆಕ್ರೋಶ ಉಂಟುಮಾಡಿವೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕಟ್ಟುನಿಟ್ಟಿನ ಧ್ವನಿಯಲ್ಲಿ ಎಚ್ಚರಿಕೆ ನೀಡಿದ್ದಾರೆ. SCN ಟಿವಿ ನ್ಯೂಸ್

11
1022 views