logo

ಸಿದ್ದಾರ್ಥ ಚಾರಿಟಬಲ್ ಟ್ರಸ್ಟ್ ವತಿಯಿಂದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ದೇವನಹಳ್ಳಿ: ದೇವನಹಳ್ಳಿ ಪಟ್ಟಣದ ಡಿಹೆಚ್‌ಎಲ್ ಫನ್ಷನ್ ಹಾಲ್‌ನಲ್ಲಿ ಸಿದ್ದಾರ್ಥ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ೨೦೨೪-೨೫ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.

ಸಮಾರಂಭದ ಉದ್ಘಾಟನೆಯನ್ನು ತಹಶೀಲ್ದಾರ್ ಹೆಚ್.ಬಾಲಕೃಷ್ಣ ನೆರವೇರಿಸಿದರು. ದೇವನಹಳ್ಳಿ ತಾಲೂಕು ಸಿದಾರ್ಥ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎ.ತ್ರಿಮೂರ್ತಿ ಅಧ್ಯಕ್ಷತೆಯನ್ನು ವಹಿಸಿದ್ದರು.

ರಾಜ್ಯ ಛಲವಾದಿ ಮಹಾಸಭಾ ಅಧ್ಯಕ್ಷೆ ವಾಣಿ.ಕೆ.ಶಿವರಾಮ್ ಮಾತನಾಡಿ, ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಶ್ರಮ ಪಟ್ಟು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಬೇಕು. ಮೊಬೈಲ್ ಬಳಕೆಯನ್ನು ಬಿಟ್ಟು, ಸಮಾಜದಲ್ಲಿ ಉನ್ನತ ಸ್ಥಾನ ಮಾನವನ್ನು ಪಡೆದುಕೊಳ್ಳಲು ಉತ್ತಮ ಶಿಕ್ಷಣವನ್ನು ಪಡೆದು ಐಎಎಸ್, ಐಪಿಎಸ್, ಕೆಎಎಸ್ ಮತ್ತು ಇನ್ನತರೆ ಹುದ್ದೆಗಳನ್ನು ಅಲಂಕರಿಸುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು.

ತಹಶೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್ ಮಾತನಾಡಿ, ಈ ಹಿಂದೆ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಇತ್ತು. ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದರು. ಪ್ರಸ್ತುತ ದಿನಮಾನದಲ್ಲಿ ಸರ್ಕಾರ ಶಿಕ್ಷಣಕ್ಕಾಗಿಯೇ ಹೆಚ್ಚು ಒತ್ತು ನೀಡಿದೆ. ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಸರಕಾರದ ಸವಲತ್ತುಗಳನ್ನು ಬಳಸಿಕೊಂಡು ಶೈಕ್ಷಣಿಕವಾಗಿ ವಿದ್ಯಾರ್ಥಿಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.

ಸಂಘದ ಗೌರವಾಧ್ಯಕ್ಷ ಕೆ.ವಿ.ಸ್ವಾಮಿ ಮಾತನಾಡಿ, ಮೊದಲ ವರ್ಷದ ಪ್ರಯತ್ನದಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪೋಷಕರು ಮತ್ತು ಮಕ್ಕಳು ಭಾಗವಹಿಸಿರುವುದು ಹೆಚ್ಚು ಪ್ರೋತ್ಸಾಹದಾಯಕವಾಗಿದೆ. ಈ ಕಾರ್ಯಕ್ರಮ ರಾಜ್ಯಮಟ್ಟದಲ್ಲಿ ಹೆಚ್ಚಿನ ಹೆಸರು ಮಾಡುವಂತಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮುಖಂಡ ಶೆಟ್ಟಿಗೆರೆ ರಾಜಣ್ಣ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ (ಪ್ರಭಾರ) ಕೆ.ಹನುಮಂತರಾಯಪ್ಪ, ಕೃಷಿ ಸಹಾಯಕ ನಿರ್ದೇಶಕಿ ಸುಶೀಲಮ್ಮ, ವಿಶ್ವನಾಥಪುರ ಗ್ರಾಪಂ ಕಾರ್ಯದರ್ಶಿ ಪದ್ಮಮ್ಮ.ಕೆ.ವಿ.ಸ್ವಾಮಿ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್‍ಯದರ್ಶಿ ಕೆ.ಆರ್.ನಾಗೇಶ್, ಮಾಜಿ ಪ್ರಧಾನ ಕಾರ್‍ಯದರ್ಶಿ ಎಸ್.ಮಾರುತಿ, ಶಿಡ್ಲಘಟ್ಟ ತಾಲೂಕು ಆಡಳಿತ ಕಚೇರಿಯ ಶಿರಸ್ತೇದಾರ ಎನ್.ಪಿ.ರಾಜು, ಟ್ರಸ್ಟ್‌ನ ಕಾರ್‍ಯಕಾರಿ ಸಮಿತಿಯ ಪ್ರಧಾನ ಕಾರ್‍ಯದರ್ಶಿ ಶ್ರೀನಿವಾಸ್(ಗಾಂಧಿ), ಖಜಾಂಚಿ ಮುನಿರಾಜು, ಉಪಾಧ್ಯಕ್ಷರಾದ ಮುನಿಕೃಷ್ಣ, ಜಗದೀಶ್, ರಘು.ಎಲ್, ನಿರ್ದೇಶಕರಾದ ಜಿ.ನಾರಾಯಣಸ್ವಾಮಿ, ಗೋವಿಂದರಾಜು, ದೇವರಾಜ್, ನಾರಾಯಣಸ್ವಾಮಿ.ಎಂ, ಮುನಿಶಾಮಪ್ಪ, ಕೆಂಪಣ್ಣ, ವೇದಶ್ರೀ.ಎಂ, ಲಾವಣ್ಯ.ವಿ, ಪೋಷಕರು, ವಿದ್ಯಾರ್ಥಿಗಳು ಇದ್ದರು.

ಚಿತ್ರ: ದೇವನಹಳ್ಳಿ ಪಟ್ಟಣದ ಡಿಹೆಚ್‌ಎಲ್ ಫನ್ಷನ್ ಹಾಲ್‌ನಲ್ಲಿ ಸಿದ್ದಾರ್ಥ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ೨೦೨೪-೨೫ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂsದಲ್ಲಿ ತಹಶೀಲ್ದಾರ್ ಬಾಲಕೃಷ್ಣ.ಹೆಚ್ ಮಾತನಾಡಿದರು.

8
275 views