ಚಿಕ್ಕನಾಯಕನಹಳ್ಳಿ | ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪರಿಶೀಲಿಸಿದ ಡಿಸಿ
ಚಿಕ್ಕನಾಯಕನಹಳ್ಳಿ | ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪರಿಶೀಲಿಸಿದ ಡಿಸಿ
ಚಿಕ್ಕನಾಯಕನಹಳ್ಳಿ ತಾಲೂಕಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಮಾವತಿ ಜಲಾಶಯದಿಂದ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ ನಡೆಯುತ್ತಿರುವ ಚಾನಲ್ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿದರು. ಕಾಮಗಾರಿಯ ಪ್ರಗತಿಯನ್ನು ಅವಲೋಕಿಸಿ, ಕೆಲಸವನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯೋಜನೆ ಪೂರ್ಣಗೊಂಡರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಕೆ. ಸುರೇಶ್ ಬಾಬು ಉಪಸ್ಥಿತರಿದ್ದು ಮಾಹಿತಿ ಪಡೆದರು.