logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್

ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ ಕಾಪಾಡಿಕೊಳ್ಳಬೇಕು.

ಪತ್ರಕರ್ತರೂ ಆಗಿದ್ದ ಮಹಾತ್ಮ ಗಾಂಧಿಯವರ ಮಾತಿನಂತೆ ಸರ್ವೋದಯ, ಅಂತ್ಯೋದಯದ ಪರವಾಗಿ ಪತ್ರಕರ್ತರು ಇರಬೇಕು. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಇನ್ನೂ ಅಸಮಾನತೆ ಕಾಣುತ್ತಿದ್ದೇವೆ. ಅಂಬೇಡ್ಕರ್ ಅವರೂ ಪತ್ರಕರ್ತರಾಗಿದ್ದರು. ಈ ಅಸಮಾನತೆ ಹೋಗದೆ ಹೋದರೆ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ ಎನ್ನುವ ಮಾತನ್ನು ಅಂಬೇಡ್ಕರ್ ಹೇಳಿದ್ದರು.

ನಾನು ನಿತ್ಯ ದಿನಪತ್ರಿಕೆಗಳನ್ನು ಓದಿದ ಬಳಿಕವೇ ಇತರೆ ಕಾರ್ಯಗಳಿಗೆ ಮುಂದಾಗುತ್ತೇನೆ. ಪತ್ರಿಕೆಗಳು ಈಗಲೂ ಹೆಚ್ಚಿನ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿವೆ.

ಈಗ ಊಹಾ ಪತ್ರಿಕೋದ್ಯಮದ ಹಾವಳಿ ಹೆಚ್ಚುತ್ತಿದೆ. ಸತ್ಯ ಬರೆಯುವ ಮತ್ತು ಸಂಶೋಧನೆ ನಡೆಸಿ ಬರೆಯುವ ಪತ್ರಕರ್ತರ ಸಂಖ್ಯೆ ಸುಳ್ಳು ಬರೆಯುವ ಪತ್ರಕರ್ತರ ಸಂಖ್ಯೆಗಿಂತ ಹೆಚ್ಚಾಗಬೇಕು. ಒಂದು ಗುಂಪು ಅಥವಾ ಒಂದು ಸಿದ್ಧಾಂತಕ್ಕೆ ಮಾರು ಹೋಗದೆ ವಾಸ್ತವಾಂಶಕ್ಕೆ ಕನ್ನಡಿ ಹಿಡಿಯಬೇಕು.

ಹೊಸ ತಂತ್ರಜ್ಞಾನದ ಜೊತೆಗೆ ಮಾಧ್ಯಮರಂಗ ಮತ್ತು ಪತ್ರಕರ್ತರೂ ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳಬೇಕು. ಹೊಸ ಸವಾಲುಗಳಿಗೆ ತಮ್ಮನ್ನು ತಾವು ಸಜ್ಜುಗೊಳಿಸಿಕೊಂಡು ಹದಗೊಳ್ಳಬೇಕು.

- ಕರ್ನಾಟಕ ಮಾಧ್ಯಮ‌ ಅಕಾಡೆಮಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಪತ್ರಕರ್ತರಿಗೆ "2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು" ವಿತರಣಾ ಸಮಾರಂಭದಲ್ಲಿ ಮುಖ್ಯಮಂತ್ರಿ Siddaramaiah ಅವರ ಮಾತುಗಳು

3
13 views

Comment