ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಶಿರಾ ಇವರ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಶಿರಾ ಇವರ ಸಹಯೋಗದಲ್ಲಿ ಶಿರಾ ನಗರದ ಜಾಜಮ್ಮನ ಕಟ್ಟೆಯನ್ನು ಪುನಶ್ಚೇತನಗೊಳಿಸುವ ಕಾಮಗಾರಿಯ ಮೊದಲ ಹಂತವಾಗಿ ಕೆರೆಯ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಮಾನ್ಯ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಟಿ.ಬಿಜಯಚಂದ್ರ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಜೀಶಾನ್ ಮೆಹಮೂದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಆರ್ ಮಂಜುನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವೀಣ್,ಸದಾಶಿವ ಗೌಡ,ನಗರಸಭೆ ಪೌರಾಯುಕ್ತ ರುದ್ರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಂಗಸ್ವಾಮಯ್ಯ,ನಗರಸಭೆ ಸದಸ್ಯರಾದ ರಾಘವೇಂದ್ರ, ರಾಧಾಕೃಷ್ಣ,ರಾಮು,ಸ್ವಾತಿ ಮಂಜೇಶ್,ಉಮಾ ವಿಜಯರಾಜ್,ಸರೋಜಾ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಮುಖಂಡರು ಹಾಗೂ ಜಾಜಿಕಟ್ಟೆ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.