ಆಳಂದ್ ನಲ್ಲಿ ಕಾಮಗಾರಿ ಕುಂಠಿತ ಅಧಿಕಾರಿಗಳಿಗೆ ಡಿಸಿ ವಾರ್ನಿಂಗ್
ಕುಡಿಯುವ ನೀರಿನ ಯೋಜನೆ ಕಾಮಗಾರಿ ಯುಜಿಡಿ ಮತ್ತು ಚರಂಡಿಯ ಅಭಿವೃದ್ಧಿ ಕಾಮಗಾರಿಗಳು ಅನೇಕ ತಿಂಗಳಿಂದ ಆಮೆ ಗತಿಯಲ್ಲಿ ನಡೆಯುತ್ತಿದ್ದು ದಟ್ಟನೆಯ ಧೂಳು ನಿಂತುಕೊಂಡಿರುವ ಕೊಳಚೆ ನೀರಿನಿಂದ ವಾಹನಗಳ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ ಸಂಬಂಧಪಟ್ಟವರು ಕೂಡಲೇ ಗಮನಹರಿಸಿ ನಿಗದಿತ ಅವಧಿಯಲ್ಲಿ ಗುಣಮಟ್ಟದ ಕೆಲಸ ಮಾಡಬೇಕು ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಮಹಮ್ಮದ್ ಇಕ್ರಮುಲ್ಲಾ ಶರೀಫ್ ಅಧಿಕಾರಿಗಳಿಗೆ ವಾರ್ನ್ ಮಾಡಿದ್ದಾರೆ.