ಬಿಕೆ ಹರಿಪ್ರಸಾದ್ ಕೆಪಿಸಿಸಿ ನೂತನಅಧ್ಯಕ್ಷ
ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಹಾಗೂ ಮಂತ್ರಿ ಸ್ಥಾನದ ಪ್ರಬಲ ಬೇಡಿಕೆ ಇಟ್ಟ ಹಿನ್ನೆಲೆ ಒಬ್ಬರಿಗೆ ಒಂದು ಸ್ಥಾನ ಎಂದು ರಾ.ಗಾ ಖಡಕ್ಕಾಗಿ ಸಂದೇಶ ರವಾನಿಸಿದ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಮಂತ್ರಿ ಸ್ಥಾನ ಆಯ್ಕೆ ಮಾಡಿಕೊಂಡರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದ ಕೂಡಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಬಿಕೆ ಹರಿಪ್ರಸಾದರನ್ನು ಕೆಪಿಸಿಸಿಯ ನೂತನ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.