ಗ್ರಾಮೀಣ ಭಾಗಕ್ಕೆ ನಿರಂತರ ಶುದ್ಧ ನೀರು ಸರಬರಾಜಿಗೆ ಅಧಿಕಾರಿಗಳಿಗೆ ಸೂಚನೆ -ಖಂಡ್ರೆ
ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ದ ಕುಡಿಯ ನೀರು ಸರಬರಾಜು ಗೊಳಿಸುವುದು ಪ್ರಥಮ ಆದ್ಯತೆಯಾಗಿದೆ. ಭೂಮೇಲ್ಮೈ ನೀರು ಬಳಸಿ ಗ್ರಾಮೀಣ ಭಾಗಕ್ಕೆ ಪೂರೈಸುವುದು ಸರ್ಕಾರದ ಉದ್ದೇಶವಾಗಿದೆ. ಗ್ರಾಮೀಣ ಭಾಗಗಳಲ್ಲಿರುವ ಕೆರೆಗಳು ಜಲಸಂಪನ್ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಮೂಲಸೌಕರ್ಯಕ್ಕೆ ಬಲಗೊಳಿಸಲಾಗುವುದೆಂದು ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳ ಸಭೆ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.